ಕಾರಿಗೆ ಟ್ಯಾಂಕರ್ ಡಿಕ್ಕಿ ಮೂವರ ಸಾವು..!!

Post by: 0

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದ ಸಮೀಪ ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.ಮೃತರು ಹುಬ್ಬಳ್ಳಿ ಮೊಹಮ್ಮದ್ ಇಶಾನ್ , ಮೊಹಮದ್ ಸೈಫ್ , ಇಸ್ಮಾಯಿಲ್ ಎಂದು ತಿಳಿದು ಬಂದಿದೆ. ಈ ಮೂವರು ಸ್ನೇಹಿತರು ಕಾರ್​ನಲ್ಲಿ ಪ್ರಯಾಣ ಮಾಡುವಾಗ ಪ್ರವಾಸಕ್ಕೆ ಹೊರಟಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.ಕಾರಿನಲ್ಲಿ 6 ಜನ ಸ್ನೇಹಿತರು ದೇವರ ದರ್ಶನಕ್ಕೆ ಕಾರವಾರಕ್ಕೆ ತೆರಳುತ್ತಿದ್ದರು. ಕಲಘಟಗಿ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Make sure you enter all the required information, indicated by an asterisk (*). HTML code is not allowed.

No Internet Connection