ತೂಕದಲ್ಲಿ ಮೋಸ ಮಾಡುತ್ತಿದ್ದ ಖರೀದಿದಾರನಿಗೆ, ರೈತರು ತರಾಟೆಗೆ ತೆಗೆದುಕೊಂಡರು. ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ವಿಠಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಡಿಜಿ ಕೊಪ್ಪಲು ಗ್ರಾಮದ ರೈತಹನುಮೇಗೌಡ ಅವರ ಮಗ ರಘು ಎಂಬುವವರ ಒಂದುವರೆ ಎಕ್ಕರೆ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ ಮಾರಾಟ ಮಾಡುವ ಸಮಯದಲ್ಲಿ ಖರೀದಿ ಮಾಡುತ್ತಿದ್ದವರು ತೂಕದಲ್ಲಿ ಮೋಸ ಮಾಡುತ್ತಿದ್ದ, ಮೋಸಗಾರನನ್ನು ಗ್ರಾಮಸ್ಥರು ಕಂಡುಹಿಡಿದು ತರಾಟೆಗೆ ತೆಗೆದುಕೊಂಡು, ಇಂತಹ ಮೋಸಗಾರರನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರೈತರಿಗೆ ಮೋಸ ಆಗದಂತೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. ನಂತರ ಮಾತನಾಡಿದ ಗ್ರಾಮದ ಮುಖಂಡ ಮಂಜುನಾಥ್ ರೈತರು ಕಷ್ಟಪಟ್ಟು ಬೆಳೆದ ಬೆಲೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಇಲ್ಲ. ಬೆಳೆ ಬೆಳೆಯಲು ಮಾಡಿದ ಸಾಲವನ್ನು ತೀರಿಸಲು ಆಗದೆ ಸಂಕಷ್ಟಕ್ಕೆ ಸಿಲುಕಿರುತ್ತಾರೆ. ಸರ್ಕಾರಿ ಮಾರುಕಟ್ಟೆಗೆ ಮಾರಾಟ ಮಾಡಿದರೆ ತಕ್ಷಣ ಹಣ ಸಿಗುವುದಿಲ್ಲ ಎಂದು ಗ್ರಾಮಕ್ಕೆ ಬರುವಂತಹ ಖರೀದಿದಾರರಿಗೆ ಮಾರಾಟ ಮಾಡುವವರೇ ಹೆಚ್ಚಾಗಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಗ್ರಾಮದ ಯುವ ರೈತ ರಘು ಎಂಬುವವರು ಸುಮಾರು ಒಂದುವರೆ…