ಏಕದಿನ ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಬಿಡುಗಡೆ..!!! ಇಲ್ಲಿದೆ ಟೂರ್ನಿ ವಿವರ..!!

27 June, 2023
ಏಕದಿನ ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಬಿಡುಗಡೆ..!!! ಇಲ್ಲಿದೆ ಟೂರ್ನಿ ವಿವರ..!! ನವದೆಹಲಿ: 13ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ಪ್ರತಿಷ್ಠಿತ ಜಾಗತಿಕ ಟೂರ್ನಿ ನಡೆಯಲಿದೆ. ಸೆಮಿಫೈನಲ್ ಪಂದ್ಯವನ್ನು ಮುಂಬೈ ಮತ್ತು ಕೋಲ್ಕತದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ. ಐಸಿಸಿ ಮತ್ತು ಅತಿಥೇಯ ಬಿಸಿಸಿಐ ಮುಂಬೈನಲ್ಲಿ ಜಂಟಿಯಾಗಿ ಆಯೋಜಿಸಿರುವ ವಿಶೇಷ ಸಮಾರಂಭದಲ್ಲಿ ಟೂರ್ನಿಯ ವೇಳಾಪಟ್ಟಿ ಅನಾವರಣಗೊಳಿಸಲಾಯಿತು. ಇತ್ತೀಚೆಗೆ ಓವಲ್​ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಫೈನಲ್ ವೇಳೆ ಆತಿಥೇಯ ಬಿಸಿಸಿಐ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಐಸಿಸಿಗೆ ಸಲ್ಲಿಸಿತ್ತು. ಬಳಿಕ ವೇಳಾಪಟ್ಟಿಯ ಬಗ್ಗೆ ಪಾಕಿಸ್ತಾನ ತಗಾದೆ ತೆಗೆದಿದ್ದ ಕಾರಣ. ಅದರ ಬಿಡುಗಡೆ ವಿಳಂಬಗೊಂಡಿತ್ತು. ಆಗಸದಲ್ಲಿ ಅನಾವರಣಗೊಂಡ ಟ್ರೋಫಿವಿಶ್ವಕಪ್ ಟ್ರೋಫಿಯನ್ನು ವಿಶೇಷವಾಗಿ ಆಗಸದಿಂದ ಅನಾವರಣಗೊಳಿಸಲಾಗಿದೆ. ಭೂಮಿಯಿಂದ ಸುಮಾರು 1,20,000 ಅಡಿ ಎತ್ತರದಲ್ಲಿ ಬಲೂನ್‌ಗೆ ಕಟ್ಟಿದ ಪ್ರತಿಷ್ಠಿತ ಬೆಳ್ಳಿಯ ಟ್ರೋಫಿಯನ್ನು ಅಹಮದಾಬಾದ್‌ನ ನರೇಂದ್ರ ಮೋದಿ…

ಬದಲಾದ ವೀರ್ಯ.!!! 1.50 ಕೋಟಿ ದಂಡ ಕೊಟ್ಟ ಖಾಸಗಿ ಆಸ್ಪತ್ರೆ ....!!!

27 June, 2023
ಬದಲಾದ ವೀರ್ಯ.!!! 1.50 ಕೋಟಿ ದಂಡ ಕೊಟ್ಟ ಖಾಸಗಿ ಆಸ್ಪತ್ರೆ ....!!! ನವದೆಹಲಿ: ಸಹಾಯಕ ಸಂತಾನೋತ್ಪತ್ತಿ ತಂತ್ರ (ಎಆರ್‌ಟಿ) ಪ್ರಕ್ರಿಯೆಯಲ್ಲಿ ವೀರ್ಯ ಅದಲು-ಬಲದು ಮಾಡಿದಕ್ಕೆ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ (ಎನ್‌ಸಿಡಿಆರ್‌ಸಿ) ದೆಹಲಿಯ ಖಾಸಗಿ ಆಸ್ಪತ್ರೆ ಮತ್ತು ವೈದ್ಯರಿಗೆ 1.50 ಕೋಟಿ ರೂಪಾಯಿ ದಂಡ ವಿಧಿಸಿದೆ. ಮಹಿಳೆಯೊಬ್ಬರು ಜೂನ್ 2009ರಲ್ಲಿ ಎಆರ್‌ಟಿ ಪಕ್ರಿಯೆಯ ಮೂಲಕ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಶಿಶುಗಳ ರಕ್ತದ ಗುಂಪು ಪಾಲಕರ ಗುಂಪಿನೊಂದಿಗೆ ಹೊಂದಾಣಿಕೆಯಾಗಿರಲಿಲ್ಲ. ಹೀಗಾಗಿ, ಪಿತೃತ್ವ ಪರೀಕ್ಷೆ ಅಥವಾ ಡಿಎನ್‌ಎ ಪ್ರೊಫೈಲ್ ಪರೀಕ್ಷೆಯನ್ನು ನಡೆಸಲಾಯಿತು. ಆಗ, ಮಹಿಳೆಯ ಪತಿಯು ಈ ಅವಳಿ ಮಕ್ಕಳ ಜೈವಿಕ ತಂದೆ ಅಲ್ಲ ಎಂಬುದು ಬಹಿರಂಗವಾಯಿತು. ಈ ಹಿನ್ನೆಲೆಯಲ್ಲಿ ದಂಪತಿಯು ಸೇವೆಯಲ್ಲಿನ ನಿರ್ಲಕ್ಷ್ಯಕ್ಕಾಗಿ 2 ಕೋಟಿ ರೂ. ಪರಿಹಾರ ನೀಡಬೇಕೆಂದು ಖಾಸಗಿ ಆಸ್ಪತ್ರೆ ವಿರುದ್ಧ ದೂರು ಸಲ್ಲಿಸಿದ್ದರು. ಈ ದೂರನ್ನು ಆಲಿಸಿದ ಆಯೋಗ ಇತ್ತೀಚಿನ ವರ್ಷಗಳಲ್ಲಿ ನಾಯಿಕೊಡೆಗಳಂತೆ ಹುಟ್ಟಿಕೊಂಡಿರುವ ಮತ್ತು ಅನೈತಿಕ ಅಭ್ಯಾಸಗಳನ್ನು ಅನುಸರಿಸುತ್ತಿರುವ ಎಆರ್‌ಟಿ ಚಿಕಿತ್ಸಾಲಯಗಳನ್ನು ತೀವ್ರವಾಗಿ ತರಾಟೆಗೆ…

ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೆಚ್.ಎನ್.ಲವಣ್ಣ ಅವಿರೋಧವಾಗಿ ಆಯ್ಕೆ..

08 February, 2023
ಶ್ರವಣಬೆಳಗೊಳ: ಹೋಬಳಿಯ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಹಡೇನಹಳ್ಳಿ ಹೆಚ್.ಎನ್.ಲವಣ್ಣ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.ಈ ಹಿಂದಿನ ಅಧ್ಯಕ್ಷ ಕೇಶವಮೂರ್ತಿ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಹಡೇನಹಳ್ಳಿ ಹೆಚ್.ಎನ್.ಲವಣ್ಣ ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಮತ್ಯಾವ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಚುನಾವಣಾಧಿಕಾರಿ ಸುನಿಲ್ ಕುಮಾರ್ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು. ನೂತನ ಅಧ್ಯಕ್ಷ ಹಡೇನಹಳ್ಳಿ ಹೆಚ್.ಎನ್.ಲವಣ್ಣ ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇವೆ. ಎಲ್ಲಾ ಸದಸ್ಯರ ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬಹುದು ಎಂದು ಹೇಳಿದರು.ಮಾಜಿ ಅಧ್ಯಕ್ಷ ಕೇಶವಮೂರ್ತಿ, ಉಪಾಧ್ಯಕ್ಷೆ ಪ್ರೀತಿ ಕುಮಾರಿ ಸೇರಿದಂತೆ 14 ಸದಸ್ಯರು ಹಾಜರಿದ್ದರು. ರಾಜ್ಯ ಮಾರಾಟ ಮಹಾ ಮಂಡಳದ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮಿಗೌಡ, ಕನ್ನಡ ಸಾಹಿತ್ಯ…

ತುಳು ಸ್ಥಾನಮಾನ ವಿಚಾರ.ಸಮಿತಿಯ ವರದಿ ನೋಡಿಕೊಂಡು ಮುಂದಿನ ಕ್ರಮ:- ಸಂಸ್ಕೃತಿ ಸಚಿವ ವಿ.ಸುನಿಲ್‌ಕುಮಾರ್

08 February, 2023
ಉಡುಪಿ: ತುಳು ಭಾಷೆಗೆ ಸ್ಥಾನಮಾನ ಸಂಬಂಧ ಸಾಧಕ-ಬಾಧಕಗಳ ಚರ್ಚೆಗೋಸ್ಕರ ಸಮಿತಿ ರಚಿಸಲಾಗಿದ್ದು, ಸಮಿತಿಯ ವರದಿ ನೋಡಿಕೊಂಡು ಮುಂದಿನ ದಿನಗಳಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಾಜ್ಯದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ. ಕನ್ನಡ ಬಿಟ್ಟು ಬೇರೆ ಏನೂ ಯೋಚನೆ ಮಾಡಲು ಸಾಧ್ಯವಿಲ್ಲ. ತುಳು ಕನ್ನಡದ ಚಟುವಟಿಕೆ ಮತ್ತು ಕನ್ನಡ ನಾಡಿನ ಜೊತೆ ಜೊತೆಗೆ ಯಾವತ್ತೂ ಇದೆ. ತುಳುನಾಡು ಪ್ರತ್ಯೇಕವಾಗಿ ಬೇಕು ಎಂದು ನಾವು ಕೇಳುತ್ತಿಲ್ಲ. ತುಳು ಭಾಷೆಗೆ ಎರಡನೇ ಆದ್ಯತೆಯನ್ನು ಕೇಳುತ್ತಿದ್ದೇವೆ ಎಂದರು. ಕನ್ನಡಕ್ಕೆ ಪರಮೋಚ್ಚವಾದ ಎಲ್ಲಾ ಸ್ಥಾನಮಾನಗಳು ಸಿಗುತ್ತದೆ. ಬೇರೆ ಬೇರೆ ರಾಜ್ಯಗಳಲ್ಲಿ ಆದ್ಯತೆಗಳನ್ನ ಕೊಡುವ ಪ್ರಕ್ರಿಯೆ ಇದೆ. ಹಲವಾರು ಮನವಿಗಳು ಬಂದ ನಂತರ ಸಾಧಕ ಬಾದಕಗಳ ಚರ್ಚೆಗೋಸ್ಕರ ಸಮಿತಿ ರಚಿಸಲಾಗಿದೆ . ಸಮಿತಿ ಕೊಡುವ ವರದಿ ನೋಡಿಕೊಂಡು ಮುಂದಿನ ದಿನಗಳಲ್ಲಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದವರು ತಿಳಿಸಿದರು.
Page 1 of 2
No Internet Connection