ಬೆಂಗಳೂರಿಗೆ ಮತ್ತು ನನ್ನ ಸಂಬಂಧದ ಬಗ್ಗೆ ಅಶ್ವತ್ಥ ನಾರಾಯಣ್​​ಗೆ ಗೊತ್ತಿಲ್ಲ..!! ಡಿಕೆಶಿ ತಿರುಗೇಟು..!!

27 June, 2023
ಬೆಂಗಳೂರಿಗೆ ಮತ್ತು ನನ್ನ ಸಂಬಂಧದ ಬಗ್ಗೆ ಅಶ್ವತ್ಥ ನಾರಾಯಣ್​​ಗೆ ಗೊತ್ತಿಲ್ಲ..!! ಡಿಕೆಶಿ ತಿರುಗೇಟು..!! ಬೆಂಗಳೂರು: ‘ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಅಶ್ವತ್ಥ ನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಉತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ್​ಗೆ ತಿರುಗೇಟು ನೀಡಿದರು. ‘ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂಭಿಸಿದೆ. ತಮಿಳುನಾಡಿನ ಗಡಿ ಭಾಗ ಸಂಗಮದ ಬಳಿ ಕೆಂಪೇಗೌಡರ ಕೋಟೆ ಇದೆ. ಅದರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಆ ಕೋಟೆ ಸಮೀಪ ಅಕ್ಕಪಕ್ಕದಲ್ಲಿ ನಿಜಲಿಂಗಪ್ಪ ಹಾಗೂ ವೀರೇಂದ್ರ ಪಾಟೀಲ್ ಮನೆ ಇದೆ. ಅಲ್ಲೇ ಹತ್ತಿರದಲ್ಲಿ ನನ್ನ ತಂದೆ ದೊಡ್ಡಹಾಲಹಳ್ಳಿ ಕೆಂಪೇಗೌಡರ ನಿವಾಸ ಇದೆ. ಇತ್ತೀಚೆಗೆ ಅದನ್ನು ಮಾರಿದ್ದೇನೆ. ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಇರುವ…

ವಿದ್ಯುತ್ ದರ ಏರಿಕೆಗೂ..!!! ಗೃಹಜ್ಯೋತಿಗೂ ಸಂಬಂಧವಿಲ್ಲ:.. ಸಿದ್ದರಾಮಯ್ಯ..!!

23 June, 2023
ವಿದ್ಯುತ್ ದರ ಏರಿಕೆಗೂ..!!! ಗೃಹಜ್ಯೋತಿಗೂ ಸಂಬಂಧವಿಲ್ಲ:.. ಸಿದ್ದರಾಮಯ್ಯ..!! ಬೆಂಗಳೂರು: ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದನ್ನು ಮನವರಿಕೆ ಮಾಡಿಸಿದರು. ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ಕೆ.ಇ. ಆರ್.ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು ಎಂದು ವಿವರಿಸಿದರು. ನಿಯೋಗವು ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ , ಕಾಸಿಯಾ, ಎಫ್.ಕೆ.ಸಿ.ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕೆ.ಇ.ಆರ್.ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ…

ಜುಲೈ 4ರೊಳಗೆ 5 ಗ್ಯಾರಂಟಿ ಕೊಡಿ ..!! ಅಥವಾ ಅಧಿಕಾರ ಬಿಡಿ : ಮಾಜಿ ಸಿಎಂ ಬಿಎಸ್​ವೈ..!!

22 June, 2023
ಜುಲೈ 4ರೊಳಗೆ 5 ಗ್ಯಾರಂಟಿ ಕೊಡಿ ..!! ಅಥವಾ ಅಧಿಕಾರ ಬಿಡಿ : ಮಾಜಿ ಸಿಎಂ ಬಿಎಸ್​ವೈ..!! ದಾವಣೆಗೆರೆ: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಜುಲೈ 4ರೊಳಗೆ ಈಡೇರಿಸಬೇಕು ಇಲ್ಲವಾದಲ್ಲಿ ಜುಲೈ 5ರಿಂದ ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದ್ಧಾರೆ. ದಾವಣಗೆರೆಯಲ್ಲಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬಿಎಸ್​ವೈ ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸಹಿ ಮಾಡಿದ ಕಾರ್ಡ್​ಗಳನ್ನು​ ಮನೆ ಮನೆಗೆ ವಿತರಿಸಿದ್ದರು. ಇದನ್ನು ನಂಬಿ ಜನ ನಿಮಗೆ ಮತ ಹಾಕಿದ್ದಾರೆ. ನಿರೀಕ್ಷೆ ಮಾಡದಷ್ಟು ಮಟ್ಟಿಗೆ ಕಾಂಗ್ರೆಸ್​ ಗೆಲುವು ಸಾಧಿಸಿದೆ. ಉಪವಾಸ ಹೋರಾಟಹಲವು ಷರತ್ತುಗಳನ್ನು ವಿಧಿಸಿ ಶಕ್ತಿ ಯೋಜನೆ ಜಾರಿಗೆ ತಂದು ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದೀರಾ. ಅದು ಬಿಟ್ಟರೆ ಒಂದೂವರೆ ತಿಂಗಳಿನಿಂದ ಉಳಿದ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ. ಜುಲೈ 3ರಂದು ಬಜೆಟ್​…

ಸಿ.ಟಿ. ರವಿಗೆ ಮಾತಿನಲ್ಲೇ ಗುದ್ದಿದ ಸಿದ್ದು.!!! ಹಿಂದೂಗಳ ಹತ್ಯೆಯಾಗಲು ಆರ್​ಎಸ್​ಎಸ್​​, ಬಿಜೆಪಿಯವರೇ ಕಾರಣ..!!

08 February, 2023
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಹತ್ಯೆಯಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಹತ್ಯೆಗಳಾಗಿವೆ ಎಂದು ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧರಾಮಯ್ಯ, ನಮ್ಮ ಕಾಲದಲ್ಲಿ ಹಿಂದೂಗಳಷ್ಟೇ ಅಲ್ಲ, ಅಲ್ಪಸಂಖ್ಯಾತರ ಕೊಲೆ ಆಗಿವೆ. ಅವುಗಳೆಲ್ಲ ಬೇರೆ ಬೇರೆ ವಿಚಾರಕ್ಕೆ ಆಗಿರುವ ಕೊಲೆಗಳಾಗಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಹಿಂದೂಗಳ ಹತ್ಯೆಯಾಗಲು ಆರ್​ಎಸ್​ಎಸ್​​, ಬಿಜೆಪಿಯವರೇ ಕಾರಣರಾಗಿದ್ದಾರೆ. ಪರೇಶ್​ ಮೇಸ್ತ ಕೊಲೆಯಾದಾಗ ದೊಡ್ಡ ಗಲಾಟೆ ಮಾಡಿದ್ದರು. ಆಗ ಮೇಸ್ತ ಪ್ರಕರಣವನ್ನ ಸಿಬಿಐಗೆ ಕೊಟ್ಟಿದ್ದೆ, ಆಮೇಲೆ ಏನಾಯ್ತು ಎಂದು ಪ್ರಶ್ನಿಸಿದರು.ಕಾಂಗ್ರೆಸ್ ಪಾಕಿಸ್ತಾನದಲ್ಲಿ ಸ್ಪರ್ಧೆ ಮಾಡಿದರಷ್ಟೇ 150 ಸ್ಥಾನ ಗೆಲ್ಲುತ್ತದೆ ಎಂದು ಲೇವಡಿ ಮಾಡಿದ್ದ ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ, ಕರ್ನಾಟಕ ಪಾಕಿಸ್ತಾನದಲ್ಲಿ ಇದೆಯಾ?ಭಾರತದಲ್ಲಿದೆಯಾ? ಚುನಾವಣೆ ನಡೆಯುತ್ತಿರುವುದು ಪಾಕಿಸ್ತಾನದಲ್ಲಾ? ಕರ್ನಾಟಕದಲ್ಲಾ? ಪೆದ್ದು ಪೆದ್ದಾಗಿ ಮಾತನಾಡುತ್ತೀರಲ್ಲಾ ಎಂದು ಕಿಡಿಕಾರಿದರು.
No Internet Connection